
BJP
ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್ಎಸ್ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.
ಪ್ರವಾಹಪೀಡಿತರಿಗೆ ಪರಿಹಾರ ನೀಡಲು ನಾನು ಸಚಿವೆಯಲ್ಲ; ವಿವಾದಕ್ಕೀಡಾದ ಸಂಸದೆ ಕಂಗನಾ ರಣಾವತ್
ಹಿಮಾಚಲ ಪ್ರದೇಶದಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಿಮಾಚಲದ ಜನರು ಕಂಗಾಲಾಗಿದ್ದಾರೆ. ಆದರೆ, ಇಲ್ಲಿನ ಮಂಡಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಇಲ್ಲಿಯವರೆಗೂ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಭಾನುವಾರ ಅವರು ಮಂಡಿಗೆ ಭೇಟಿ ನೀಡಿದಾಗ ಪ್ರವಾಹಪೀಡಿತರಿಗೆ ಪರಿಹಾರ ನೀಡುವ ಕುರಿತು ಪ್ರಶ್ನಿಸಿದ್ದಾಗ ಉಡಾಫೆಯ ಉತ್ತರ ನೀಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
- Sushma Chakre
- Updated on: Jul 7, 2025
- 5:20 pm
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ : ಕಾನೂನು ಸಮರಕ್ಕಿಳಿದ ತೇಜಸ್ವಿ ಸೂರ್ಯ
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಿವೆ. ಈ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ನಿಗದಿ ಪರಿಷ್ಕರಣೆ ಸಮಿತಿ ವರದಿ ಬಿಡುಗಡೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ದರ ಏರಿಕೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಬಿಎಂಆರ್ಸಿಎಲ್ ಜಾಹೀರಾತುಗಳ ಮೂಲಕ ಆರ್ಥಿಕ ನಷ್ಟವನ್ನು ತುಂಬಲು ಯತ್ನಿಸುತ್ತಿದೆ.
- Ramesha M
- Updated on: Jul 6, 2025
- 9:17 pm
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಪ್ರಲ್ಹಾದ ಜೋಶಿ
ಕರ್ನಾಟಕದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ತಜ್ಞರ ಸಮಿತಿಯು ಲಸಿಕೆ ಮತ್ತು ಹೃದಯಾಘಾತಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೇಜವಾಬ್ದಾರಿ ಪರಮಾವಧಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ಮಾಡಿದ್ದಾರೆ.
- Vivek Biradar
- Updated on: Jul 6, 2025
- 7:37 pm
ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. ಕನಕಪುರದಲ್ಲಿ ಮಾತನಾಡಿರುವ ಅವರು ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎನ್ನುವ ತಮ್ಮದೇ ದಾಟಿಯಲ್ಲಿ ಟಾಂಗ್ ಕೊಟ್ಟಿದ್ದಾರೆ.
- Web contact
- Updated on: Jul 6, 2025
- 4:53 pm
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್, ವಿಡಿಯೋ ವೈರಲ್
ಮದುವೆ ವಿಚಾರಕ್ಕೆ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಸಂಬಂಧಿಕರು ಹಾಗೂ ಭಾವಿ ಬೀಗರ ನಡುವೆ ಮಾರಾಮಾರಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್ನೊಂದಿಗೆ ನಿಶ್ಚಿತಾರ್ಥವಾಗಿದೆ. ಈಗ ಮದುವೆ ಲೇಟಾದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದಾರೆ.ಈ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಾಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Web contact
- Updated on: Jul 6, 2025
- 3:08 pm
ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನಿರ್ಧಾರ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನವನ್ನು ಉಂಟುಮಾಡಿದ್ದು, ವಿಪಕ್ಷ ನಾಯಕರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿವೃತ್ತಿ ಸಮೀಪಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
- Harish GR
- Updated on: Jul 6, 2025
- 2:54 pm
ಪುತ್ತೂರು: ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಅರೆಸ್ಟ್, ಮೈಸೂರಿನಲ್ಲಿ ಸಿಕ್ಕಿಬಿದ್ದ ಆರೋಪಿ
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆಗೆ ಮಗು ಜನಿಸಿದ ನಂತರ ಮದುವೆ ನಿರಾಕರಿಸಿದ ಆರೋಪದ ಮೇಲೆ ಪುತ್ತೂರಿನ ಬಿಜೆಪಿ ಮುಖಂಡನ ಮಗ ಕೃಷ್ಣ ಜೆ.ರಾವ್ನನ್ನು ಕೊನೆಗೂ ಬಂಧಿಸಲಾಗಿದೆ. ಯುವತಿ ನೀಡಿದ್ದ ದೂರಿನ ಮೇರೆಗೆ ಕ್ರಮ ಕೈಗೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಮೈಸೂರಿನಿಂದ ವಶಕ್ಕೆ ಪಡೆದಿದ್ದಾರೆ.
- Ashok
- Updated on: Jul 5, 2025
- 7:46 pm
ಗೋಕಾಕ್: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ, ವಿಡಿಯೋ ವೈರಲ್
ಬಿಜೆಪಿ ನಾಯಕ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ. ಗೋಕಾಕ್ನ ಲಕ್ಷ್ಮೀ ದೇವಿ ಜಾತ್ರೆ ವೇಳೆ ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಇಲ್ಲಿದೆ.
- Sahadev Mane
- Updated on: Jul 5, 2025
- 3:08 pm
ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷರ ಆಯ್ಕೆ ಸಾಧ್ಯತೆ; ಸಂಭಾವ್ಯ ಪಟ್ಟಿಯಲ್ಲಿದೆ ಈ 3 ಹೆಸರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಇನ್ನೂ ಸಸ್ಪೆನ್ಸ್ ಆಗಿಯೇ ಉಳಿದಿದ್ದರೂ, ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷೆ ಆಯ್ಕೆಯಾಗಬಹುದು ಎಂದು ವಿವಿಧ ವರದಿಗಳು ಹೇಳಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಬಿಜೆಪಿ ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷೆಯಾಗಿ ಮಹಿಳೆಯನ್ನು ನೇಮಿಸುವ ಸಾಧ್ಯತೆಯಿದೆ. ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಡಿ. ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಅವರಂತಹ ನಾಯಕರು ಈ ರೇಸ್ನಲ್ಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಯಲ್ಲಿ ಆರ್ಎಸ್ಎಸ್ ಪಾತ್ರವೂ ಇರುತ್ತದೆ.
- Sushma Chakre
- Updated on: Jul 4, 2025
- 8:14 pm
ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ MLC ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್
ಕರ್ನಾಟಕ ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರರಕಣ ಸಂಬಂಧ ಬಿಜೆಪಿ ವಿಧಾನಪರಿಷತ್ ಎನ್ ರವಿಕುಮಾರ್ ಅವರಿಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜೊತೆಗೆ ಒಂದು ಖಡಕ್ ಸೂಚನೆಯೊಂದನ್ನು ಸಹ ನೀಡಿದೆ. ಹಾಗಾದ್ರೆ, ಕೋರ್ಟ್ ನಲ್ಲಿ ನಡೆದ ವಾದ ಪ್ರತಿವಾದ ಹೇಗಿತ್ತು ಎನ್ನುವ ವಿವರ ಇಲ್ಲಿದೆ.
- Ramesha M
- Updated on: Jul 4, 2025
- 5:59 pm